ಚಿತ್ರರಂಗದ ಮತ್ತೊಂದು ರತ್ನ ಭಗವಂತನನ್ನು ಸೇರಿಕೊಂಡಿದ್ದಾರೆ. ಎಲ್ಲೆಲ್ಲೂ ನೀರವ ಮೌನ.

0
2093

ಭಾರತೀಯ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಅವರು ಭಾನುವಾರ (ಅ.11) ರಾತ್ರಿ 10.30 ಕ್ಕೆ ನಿ’ಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ, ಅವರು ಮನೆಯಲ್ಲಿಯೇ ಹೃ’ದಯಾಘಾ’ತದಿಂದ ನಿ’ಧನರಾದರು. ಪುತ್ರ ಮತ್ತು ಪುತ್ರಿಯನ್ನು ಅವರು ಅಗಲಿದ್ದಾರೆ. ಇಂದು (ಅ.12) ಅವರ ಅಂ’ತ್ಯಕ್ರಿಯೆಯನ್ನು ಹೆಬ್ಬಾಳದ ಸ್ಮ’ಶಾನದಲ್ಲಿ ನೆರವೇರಿಸಲಾಗುತ್ತದೆ. ಮೂಲತಃ ಮೈಸೂರಿನವರಾದ ರಾಜನ್, ತಮ್ಮ ಸಹೋದರ ನಾಗೇಂದ್ರಪ್ಪ ಅವರೊಂದಿಗೆ ಸೇರಿಕೊಂಡು ‘ರಾಜನ್‌-ನಾಗೇಂದ್ರ’ ಹೆಸರಿನಲ್ಲಿ ಜಂಟಿಯಾಗಿ ಸಂಗೀತ ನಿರ್ದೇಶನ ಮಾಡುತ್ತಿದ್ದರು.

1952 ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಈ ಜೋಡಿ, ಸುಮಾರು 5 ದಶಕಗಳ ಕಾಲ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿತ್ತು. 1952 ರಿಂದ 1999 ರವರೆಗೆ 375 ಕ್ಕೂ ಅಧಿಕ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಇದರಲ್ಲಿ ಕನ್ನಡದ 200ಕ್ಕೂ ಅಧಿಕ ಸಿನಿಮಾಗಳಿವೆ. ಕನ್ನಡದ ಜೊತೆ ತೆಲುಗಿನಲ್ಲಿಯೂ ಈ ಜೋಡಿ ದೊಡ್ಡ ಯಶಸ್ಸು ಕಂಡಿತ್ತು. ತಮಿಳು, ಹಿಂದಿ, ಮಲಯಾಳಂ, ಶ್ರೀಲಂಕಾದ ಸಿಂಹಳ ಭಾಷೆಯ ಸಿನಿಮಾಗಳಿಗೂ ಸಂಗೀತ ಸಂಯೋಜಿಸಿದ್ದಾರೆ. ರಾಜನ್‌ ಅವರ ಸಹೋದರ ನಾಗೇಂದ್ರ ಅವರು 2000 ರಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದರು.

ರಾಜನ್ ಸಂಗೀತ ನೀಡಿದ ಜನಪ್ರಿಯ ಸಿನಿಮಾಗಳೆಂದರೆ, ‘ಮಂತ್ರಾಲಯ ಮಹಾತ್ಮೆ’, ‘ಗಂಧದ ಗುಡಿ’, ‘ನಾ ನಿನ್ನ ಬಿಡಲಾರೆ’, ‘ಎರಡು ಕನಸು’, ‘ಕಳ್ಳ ಕುಳ್ಳ’, ‘ಬಯಲು ದಾರಿ’, ‘ನಾ ನಿನ್ನ ಮರೆಯಲಾರೆ’, ‘ಹೊಂಬಿಸಿಲು’, ‘ಆಟೋ ರಾಜ’, ‘ಗಾಳಿಮಾತು’, ‘ಚಲಿಸುವ ಮೋಡಗಳು’, ‘ಬೆಟ್ಟದ ಹೂವು’, ‘ಸುಪ್ರಭಾತ’, ‘ಮತ್ತೆ ಹಾಡಿತು ಕೋಗಿಲೆ’, ‘ಕರುಳಿನ ಕುಡಿ’, ‘ಪರಸಂಗದ ಗೆಂಡೆತಿಮ್ಮ’, ‘ಶ್ರೀನಿವಾಸ ಕಲ್ಯಾಣ’ ಮುಂತಾದವು. ಅದರಲ್ಲಿ ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್‌ ಅವರ ಸಿನಿಮಾಗಳೇ ಜಾಸ್ತಿ ಇವೆ.

‘ಬಾನಲ್ಲೂ ನೀನೇ ಭುವಿಯಲ್ಲೂ ನೀನೇ’, ‘ಬಂದೆಯಾ ಬಾಳಿನ ಬೆಳಕಾಗಿ’, ‘ಚೆಲುವೆಯ ಅಂದದ ಮೊಗಕೆ’, ‘ಎಂದೆಂದೂ ನಿನ್ನನು ಮರೆತು’, ‘ಹೊಸ ಬಾಳಿಗೆ ನೀ ಜೊತೆಯಾದೆ’,’ನಲಿವಾ ಗುಲಾಬಿ ಹೂವೇ’, ‘ನಾವಾಡುವ ನುಡಿಯೇ ಕನ್ನಡ ನುಡಿ’, ‘ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು’, ‘ತೇರಾ ಏರಿ ಅಂಬರದಾಗೆ ನೇಸರ ನಗುತಾನೇ’ ಮುಂತಾದವು ರಾಜನ್-ನಾಗೇಂದ್ರ ಜೋಡಿಯ ಸಾರ್ವಕಾಲಿಕ ಹಿಟ್ ಗೀತೆಗಳಾಗಿವೆ. ರಾಜನ್ ನಿ’ಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸಂ’ತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂ’ತಿ ಸಿಗಲಿ ಎಂದು ನಾವೆಲ್ಲರೂ ಆ ದೇವರಲ್ಲಿ ಪ್ರಾರ್ಥಿಸೋಣ.

LEAVE A REPLY

Please enter your comment!
Please enter your name here