ಈ ಕುರಿತು ಪೋಸ್ಟ್ ಮಾಡಿರುವ ವಿರಲ್ ಬಯಾನಿ, ಬುಧವಾರ ಸಂಜೆಯವರೆಗೂ ಆಕೆ ಚೆನ್ನಾಗಿದ್ದಳು. ಸಿಯಾ ಮ್ಯಾನೇಜರ್ ಅರ್ಜುನ್ ಸರಿನ್ ಜೊತೆ ಹಾಡಿನ ಬಗ್ಗೆ ಮಾತುಕತೆ ಆಗಿತ್ತು. ಆದ್ರೆ ಸಿಯಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜೊತೆಯಲ್ಲಿಯೇ ಇರುತ್ತಿದ್ದ ಮ್ಯಾನೇಜರ್ ಅರ್ಜುನ್ ಗೂ ಈ ಬಗ್ಗೆ ಸುಳಿವು ಸಿಕ್ಕಿರಲಿಲ್ಲ ಎಂದು ಬರೆದುಕೊಂಡಿದ್ದಾರೆ.

ಏಪ್ರಿಲ್ ನಿಂದ ಸಿನಿಮಾ ಇಂಡಸ್ಟ್ರಿ ಸಾಲು ಸಾಲು ಪ್ರತಿಭೆಗಳನ್ನು ಕಳೆದುಕೊಳ್ಳುತ್ತಿರುವುದು ನಿಜವಾಗ್ಲೂ ಆಘಾತಕರ ಸಂಗತಿಯಾಗಿದ್ದು . ಈಗಾಗಲೇ ಇರ್ಫಾನ್ ಖಾನ್, ರಿಷಿ ಕಪೂರ್, ವಾಜಿದ್ ಖಾನ್, ಮೆಬಿನಾ ಮೈಕಲ್, ಸುಶಾಂತ್ ಸಿಂಗ್ ರಜಪೂತ್, ಚಿರಂಜೀವಿ ಸರ್ಜಾ ಸೇರಿದಂತೆ ಹಲವು ಕಲಾವಿದರನ್ನು ಸಿನಿಮಾ ರಂಗ ಕಳೆದುಕೊಂಡಿದೆ.

LEAVE A REPLY

Please enter your comment!
Please enter your name here