ನಮ್ಮ ಎಲ್ಲಾ ಧಾರ್ಮಿಕ ಆಚರಣೆಗಳ ಹಿಂದೆ ಅಡಗಿರುವ ವೈಜ್ಞಾನಿಕ ಸತ್ಯ ಇಲ್ಲಿದೆ ನೋಡಿ.

0
2782

ನಮ್ಮ ಎಲ್ಲಾ ಧಾರ್ಮಿಕ ಆಚರಣೆಗಳ ಹಿಂದೆ ಅಡಗಿರುವ ವೈಜ್ಞಾನಿಕ ಸತ್ಯ ಇಲ್ಲಿದೆ ನೋಡಿ. 1. ಸೂರ್ಯ ನಮಸ್ಕಾರ : ಹಿಂದೂಗಳು ಸೂರ್ಯ ಭಗವಾನ್‍ಗೆ ನಮಸ್ಕಾರವನ್ನು ಸಲ್ಲಿಸುವ ವಾಡಿಕೆ ಅನಾದಿಕಾಲದಿಂದಲು ನಡೆದು ಬಂದಿದೆ. ಬೆಳಗ್ಗೆ ಸೂರ್ಯೋದಯವಾಗುವಾಗ ಸೂರ್ಯನಿಗೆ ನೀರನ್ನು ಅರ್ಪಿಸುತ್ತ ಇದನ್ನು ಮಾಡುತ್ತಾರೆ. ಏಕೆಂದರೆ ಬೆಳಗಿನ ಸೂರ್ಯ ಕಿರಣಗಳನ್ನು ನೀರಿನ ಮೂಲಕ ನೋಡುವುದು ಕಣ್ಣುಗಳಿಗೆ ಒಳ್ಳೆಯದು.

ಜೊತೆಗೆ ಈ ಅನುಷ್ಟಾನವನ್ನು ಮಾಡಲು ನಾವು ಸೂರ್ಯೋದಯಕ್ಕಿಂತ ಮೊದಲೇ ಏಳಬೇಕಾಗುತ್ತದೆ. ಇದರಿಂದಾಗಿ ನಾವು ಬೆಳಗ್ಗೆ ಬೇಗ ಏಳುವ ಅಭ್ಯಾಸವನ್ನು ಇರಿಸಿಕೊಳ್ಳುತ್ತೇವೆ. ಹೀಗಾಗಿ ಮುಂಜಾನೆಯ ಒಳ್ಳೆಯ ಮತ್ತು ನಿರ್ಮಲವಾದ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ.

2. ನಾವೇಕೆ ಉಪವಾಸವಿರುತ್ತೇವೆ: ಉಪವಾಸದ ಹಿಂದಿನ ತತ್ವವು ಆಯುರ್ವೇದದಲ್ಲಿ ಅಡಗಿದೆ. ಈ ಪ್ರಾಚೀನ ವೈಧ್ಯ ವಿಜ್ಞಾನವು ಹಲವಾರು ಕಾಯಿಲೆಗಳಿಗೆ ಮೂಲ ಕಾರಣವು ನಮ್ಮ ಜೀರ್ಣಾಂಗ ವ್ಯೂಹದಲ್ಲಿ ಬಿಡುಗಡೆಯಾಗುವ ಟಾಕ್ಸಿಕ್ ಪದಾರ್ಥಗಳೇ ಆಗಿರುತ್ತದೆ ಎಂದು ಹೇಳುತ್ತದೆ. ಈ ಟಾಕ್ಸಿಕ್ ಪದಾರ್ಥಗಳನ್ನು ನಿರಂತರವಾಗಿ ಸ್ವಚ್ಛ ಮಾಡುತ್ತ ಇರುವುದರಿಂದ ನಾವು ಆರೋಗ್ಯವಾಗಿರಬಹುದು. ಉಪವಾಸ ಮಾಡುವುದರಿಂದ ಜೀರ್ಣಾಂಗ ವ್ಯೂಹಕ್ಕೆ ಸ್ವಲ್ಪ ವಿಶ್ರಾಂತಿಯು ದೊರೆಯುತ್ತದೆ ಮತ್ತು ದೇಹದಲ್ಲಿರುವ ಅಂಗಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತವೆ.

ಒಂದು ಉಪವಾಸವು ಆರೋಗ್ಯಕ್ಕೆ ಒಳ್ಳೆಯದು. ಈ ಅವಧಿಯಲ್ಲಿ ನಿಯಮಿತವಾಗಿ ಲಿಂಬೆ ರಸವನ್ನು ಸೇವಿಸುವುದರಿಂದ ದೇಹದಲ್ಲಿ ವಾಯು ತುಂಬಿಕೊಳ್ಳುವ ಸಮಸ್ಯೆಯು ತಲೆದೋರುವುದಿಲ್ಲ. ಆಯುರ್ವೇದದಲ್ಲಿ ಹೇಳಿರುವಂತೆ ನಮ್ಮ ದೇಹದ್ಲಲಿ ಶೇ 80% ರಷ್ಟು ನೀರು ಮತ್ತು ಶೇ.20% ರಷ್ಟು ಘನ ಪದಾರ್ಥಗಳು ಇರುತ್ತವೆ. ಭೂಮಿಯ ಮೇಲೆ ಪರಿಣಾಮ ಬೀರಿದಂತೆ ಚಂದ್ರನು ನಮ್ಮ ದೇಹದಲ್ಲಿನ ನೀರಿನಂಶದ ಮೇಲೆ ಪ್ರಭಾವ ಬೀರುತ್ತಾನೆ. ಆಗ ಜನರು ಉದ್ವೇಗ, ಕಿರಿಕಿರಿ ಮತ್ತು ಹಿಂಸಾ ಪ್ರವೃತ್ತಿಗೆ ಇಳಿಯುತ್ತಾರೆ.

ಈ ಸಮಸ್ಯೆಗೆ ಉಪವಾಸವು ಪ್ರತಿ ವಿಷದಂತೆ ಕಾರ್ಯ ನಿರ್ವಹಿಸುತ್ತದೆ. ಏಕೆಂದರೆ ಇದು ನಮ್ಮ ದೇಹದಲ್ಲಿನ ಆಮ್ಲದ ಅಂಶವನ್ನು ಕಡಿಮೆ ಮಾಡುತ್ತದೆ. ಇದರಿಂದ ಜನರು ತಮ್ಮ ವಿವೇಕವನ್ನು ಉಳಿಸಿಕೊಳ್ಳಲು ಇದು ನೆರವಾಗುತ್ತದೆ. ಜೊತೆಗೆ ಕ್ಯಾನ್ಸರ್, ಹೃದ್ರೋಗ, ಮಧುಮೇಹ, ರೋಗ ನಿರೋಧಕ ಶಕ್ತಿಯಲ್ಲಿನ ನ್ಯೂನತೆಗಳನ್ನು ಹಾಗು ಇತ್ಯಾದಿಗಳನ್ನು ಇದು ಸರಿಪಡಿಸುತ್ತದೆ.

3. ನಮಸ್ಕಾರ ಮಾಡಲು ಎರಡು ಅಂಗೈಗಳನ್ನು ಜೋಡಿಸುವುದು: ಹಿಂದೂ ಸಂಪ್ರದಾಯದಲ್ಲಿ ಅತಿಥಿಗಳನ್ನು ಅಥವಾ ಹಿರಿಯರನ್ನು ಕಂಡಾಗ ಅವರನ್ನು ಸ್ವಾಗತಿಸಲು ನಮಸ್ಕಾರ ಮುದ್ರೆ ಎಂದರೆ ಎರಡು ಅಂಗೈಗಳನ್ನು ಜೋಡಿಸುವ ಕ್ರಿಯೆಯನ್ನು ಮಾಡಲಾಗುತ್ತದೆ. ಇನ್ನು ಇದರ ಹಿಂದಿನ ವೈಜ್ಞಾನಿಕ ಸತ್ಯಾಂಶವನ್ನು ನೋಡುವುದಾದರೆ, ನಮಗೆ ತಿಳಿದು ಬರುವುದು ಇಷ್ಟು. ಎರಡು ಕೈಗಳ ಅಂಗೈಗಳನ್ನು ಪರಸ್ಪರ ಜೋಡಿಸುವುದರಿಂದ ಹತ್ತು ಬೆರಳುಗಳು ಪರಸ್ಪರ ಕೂಡುತ್ತವೆ.

ಆಗ ಕಣ್ಣು, ಕಿವಿ ಮತ್ತು ಮನಸ್ಸಿನ ಒತ್ತಡ ಕೇಂದ್ರಗಳು ಒಂದನ್ನೊಂದು ತಾಕುತ್ತವೆ ಇದರಿಂದ ನಮಗೆ ಪರಿಚಯವಾಗುವ ವ್ಯಕ್ತಿಯ ಹೆಸರನ್ನು ದೀರ್ಘಕಾಲ ನಾವು ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಇದರ ಜೊತೆಗೆ ನಾವು ದೈಹಿಕವಾಗಿ ಆ ವ್ಯಕ್ತಿಯನ್ನು ಸ್ಪರ್ಶಿಸಲು ಹೋಗದ ಕಾರಣ, ಯಾವುದೇ ಕೀಟಾಣುಗಳು ಸಹ ನಮ್ಮ ಸಂಪರ್ಕಕ್ಕೆ ಬರುವುದಿಲ್ಲ.

4. ನದಿ ನೀರಿನಲ್ಲಿ ನಾಣ್ಯಗಳನ್ನು ಎಸೆಯುವುದು: ಸಾಮಾನ್ಯವಾಗಿ ನದಿ ನೀರಿನಲ್ಲಿ ನಾಣ್ಯಗಳನ್ನು ಎಸೆಯುವುದರಿಂದಾಗಿ, ಅದೃಷ್ಟವು ನಮಗೆ ದೊರೆಯುತ್ತದೆ ಎಂದು ಹೇಳಲಾಗುತ್ತದೆ. ಆದರೆ ವೈಜ್ಞಾನಿಕವಾಗಿ ಹೇಳುವುದಾದರೆ ಹಿಂದಿನ ಕಾಲದಲ್ಲಿ ನಾಣ್ಯಗಳನ್ನು ಬಹುತೇಕ ತಾಮ್ರದಲ್ಲಿಯೇ ಮಾಡಲಾಗುತ್ತಿತ್ತು. ಆದರೆ ಇಂದು ಸ್ಟೇನ್‍ಲೆಸ್ ಸ್ಟೀಲ್‍ನಲ್ಲಿ ಮಾಡಲಾಗುತ್ತಿದೆ.ತಾಮ್ರವು ಒಂದು ಅದ್ಭುತವಾದ ಲೋಹವಾಗಿದ್ದು, ಮಾನವನ ದೇಹಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ.

ಇಂತಹ ಪ್ರಯೋಜನಕಾರಿಯಾದ ತಾಮ್ರದ ನಾಣ್ಯಗಳನ್ನು ನದಿಯಲ್ಲಿ ಎಸೆಯುವುದರಿಂದ ನದಿಯ ನೀರು ಶುದ್ಧವಾಗುವುದರ ಜೊತೆಗೆ ಆ ಮೂಲಕ ಸ್ವಲ್ಪ ತಾಮ್ರವು ನಮ್ಮ ದೇಹವನ್ನು ಸೇರುವ ವ್ಯವಸ್ಥೆಯನ್ನು ನಮ್ಮ ಪೂರ್ವಜರು ಮಾಡಿದ್ದರು. ಇದು ಒಂದು ಸಂಪ್ರದಾಯವಾಗಿ ಇಂದಿಗು ನಡೆದುಕೊಂಡು ಬಂದಿದೆ.

5. ಹಣೆಗೆ ಸಿಂಧೂರ ಅಥವಾ ಕುಂಕುಮ ಹಚ್ಚುವುದು: ಮದುವೆಯಾದ ಹೆಂಗಸರು ಹಣೆಯಲ್ಲಿ ಧರಿಸುವ ಸಿಂಧೂರವು ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿರುತ್ತದೆ. ಏಕೆಂದರೆ ಸಿಂಧೂರವನ್ನು ಅರಿಶಿಣ-ಸುಣ್ಣ ಮತ್ತು ಪಾದರಸದ ಲೋಹಗಳನ್ನು ಸೇರಿಸಿ ಮಾಡಿರುತ್ತಾರೆ. ಪಾದರಸವು ಸ್ವಾಭಾವಿಕವಾಗಿ ರ’ಕ್ತದ ಒ’ತ್ತಡವನ್ನು ನಿಯಂತ್ರಿಸುವುದರ ಜೊತೆಗೆ ಲೈಂ’ಗಿಕಾಸಕ್ತಿಯನ್ನು ಸಹ ಕೆರಳಿಸುತ್ತದೆ.

ಇದರಿಂದಾಗಿಯೇ ವಿಧವೆಯರು ಸಿಂಧೂರವನ್ನು ಧರಿಸಲು ಸಂಪ್ರದಾಯ ನಿಷೇಧ ಹೇರಿರುವುದು.ಸಿಂಧೂರವನ್ನು ಹಚ್ಚಿಕೊಳ್ಳುವಾಗ ಪಿಟ್ಯುಟರಿ ಗ್ರಂಥಿಗಳವರೆಗೆ ಹಚ್ಚಿಕೊಂಡರೆ ಒಳ್ಳೆಯದು. ಏಕೆಂದರೆ ಈ ಗ್ರಂಥಿಗಳಲ್ಲಿಯೇ ನಮ್ಮ ಭಾವನೆಗಳೆಲ್ಲವು ಕ್ರೋಢೀಕರಣಗೊಳ್ಳುವುದು. ಪಾದರಸವು ಒತ್ತಡ ಮತ್ತು ಆಯಾಸವನ್ನು ಹೊಡೆದೋಡಿಸುವ ಸಾಮರ್ಥ್ಯವನ್ನು ತನ್ನಲ್ಲಿ ಹೊಂದಿದೆ.

6. ನಾವೇಕೆ ಅರಳಿ ಮರವನ್ನು ಪೂಜಿಸುತ್ತೇವೆ: ಅರಳಿ ಮರ” ಅಥವಾ ಅಶ್ವತ್ಥ ವೃಕ್ಷ ಎಂದು ಕರೆಯಲ್ಪಡುವ ಮರವನ್ನು ನಾವು ಸಾಮಾನ್ಯವಾಗಿ ಎಲ್ಲಾ ಊರುಗಳ ನಾಗರ ಕಟ್ಟೆ, ಅಶ್ವತ್ಥ ಕಟ್ಟೆ, ದೇವಾಲಯಗಳ ಬಳಿಯಲ್ಲಿ ಕಾಣುತ್ತೇವೆ. ನಿಜ ಹೇಳಬೇಕೆಂದರೆ ಇದು ಸಾಮಾನ್ಯ ಮನುಷ್ಯರಿಗೆ ನೆರಳನ್ನು ಬಿಟ್ಟರೆ ಬೇರೇನು ನೀಡುವುದಿಲ್ಲ. ಇದರಲ್ಲಿ ರುಚಿಕರವಾದ ಹಣ್ಣು ನೀಡುವುದಿಲ್ಲ.

ಆದರೂ ಒಬ್ಬ ಸಾಮಾನ್ಯ ಹಳ್ಳಿಯವರು ಅಥವಾ ಜನರು ಸಹ ಇದನ್ನು ಬೆಳೆಸಿ, ಪೋಷಿಸಿ, ಇದರ ರಕ್ಷಣೆಗೆ ನಿಂತಿರುತ್ತಾರೆ ಎಂದರೆ ಅಂತಹದು ಏನಿದೆ ಈ ಮರದಲ್ಲಿ? ಹೌದು, ಇದೆ ಅದನ್ನೆ ನಮ್ಮ ಪೂರ್ವಿಕರು ಕಂಡು ಹಿಡಿದಿದ್ದು, ಈ ಮರವು ರಾತ್ರಿ ಸಮಯದಲ್ಲಿ ಸಹ ಆಮ್ಲಜನಕವನ್ನು ಬಿಡುಗಡೆ ಮಾಡುವ ಗುಣವನ್ನು ಹೊಂದಿದೆ. ಇಂತಹ ಮರವು ಮನುಕುಲಕ್ಕೆ ಅತ್ಯಾವಶ್ಯಕ ಎಂದು ಪರಿಗಣಿಸಿಯೇ, ಅಶ್ವತ್ಥ ವೃಕ್ಷಕ್ಕೆ ಇದಕ್ಕೆ ತ್ರಿಮೂರ್ತಿಗಳ ಆವಾಸ ಸ್ಥಾನವೆಂದು ಕರೆದು ಇದನ್ನು ಪೂಜಿಸಲು ತಿಳಿಸಿದ್ದಾರೆ.

7. ಉತ್ತರಕ್ಕೆ ತಲೆ ಇಟ್ಟು ಏಕೆ ಮಲಗಬಾರದು: ಇದರ ಹಿಂದೆ ಒಂದು ಕಟ್ಟುಕತೆಯಿದೆ, ಅದೇನೆಂದರೆ ಉತ್ತರಕ್ಕೆ ತಲೆ ಇಟ್ಟು ಮಲಗುವುದರಿಂದ ದೆವ್ವ ಅಥವಾ ಭೂತಗಳನ್ನು ಆಹ್ವಾನಿಸಿದಂತಾಗುತ್ತವೆ ಎಂಬುದು. ಆದರೆ ವಿಜ್ಞಾನವು ಹೇಳುವುದೇನೆಂದರೆ ಮಾನವ ದೇಹಕ್ಕೆ ತನ್ನದೇ ಆದ ಕಾಂತ ಕ್ಷೇತ್ರವು ಇರುತ್ತದೆ (ಇದನ್ನು ಹೃದಯದ ಕಾಂತ ಅಥವಾ ಮ್ಯಾಗ್ನೆಟಿಕ್ ಕ್ಷೇತ್ರ ಎಂದು ಸಹ ಕರೆಯುತ್ತಾರೆ. ಏಕೆಂದರೆ ರ’ಕ್ತ ಪರಿಚಲನೆಯ ಕಾರಣವಾಗಿ) ಮತ್ತು ಭೂಮಿಯೇ ಒಂದು ದೊಡ್ಡ ಸೂಜಿಗಲ್ಲು ಅಥವಾ ಮ್ಯಾಗ್ನೆಟ್.

ಯಾವಾಗ ನಾವು ಉತ್ತರಕ್ಕೆ ತಲೆ ಇಟ್ಟು ಮಲಗುತ್ತೇವೆಯೋ, ಆಗ ನಮ್ಮ ದೇಹದಲ್ಲಿನ ಕಾಂತ ಕ್ಷೇತ್ರವು ಸಮತೋಲನವನ್ನು ಕಳೆದುಕೊಳ್ಳುತ್ತದೆ. ಇದರಿಂದ ಮುಂದೆ ರಕ್ತದ ಒತ್ತಡ ಮತ್ತು ಹೃದ್ರೋಗದಂತಹ ಸಮಸ್ಯೆಗಳು ಕಂಡು ಬರುತ್ತವೆ. ಆದ್ದರಿಂದ ಈ ಕಾಂತ ಕ್ಷೇತ್ರದ ಸಮತೋಲವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ. ಇದರ ಜೊತೆಗೆ ನಮ್ಮ ದೇಹದಲ್ಲಿ ಹರಿಯುವ ರ’ಕ್ತದಲ್ಲಿ ಕಬ್ಬಿಣಾಂಶವಿರುತ್ತದೆ.

ನಾವು ಉತ್ತರ ದಿಕ್ಕಿಗೆ ತಲೆಯಿಟ್ಟು ಮಲಗುವುದರಿಂದ ಆ ಕಾಂತ ಕ್ಷೇತ್ರದಿಂದ ಆಕರ್ಷಣೆಯಾಗುವ ನಮ್ಮ ದೇಹದ ಕಬ್ಬಿಣಾಂಶವು ತಲೆಯಲ್ಲಿ ಶೇಖರಗೊಳ್ಳುತ್ತದೆ. ಇದರಿಂದ ತಲೆನೋವು , ಅಲ್ಜೀಮರ್ ಕಾಯಿಲೆ, ಪ್ರಜ್ಞಾಶೂನ್ಯತೆ ( ಅರಿವಿನ ಕೊರತೆ), ಪಾರ್ಕಿನ್‍ಸನ್ ಕಾಯಿಲೆ ಮತ್ತು ಮೆದುಳಿನ ಕಾರ್ಯ ಕ್ಷೀಣಿಸುವ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

8. ನವರಾತ್ರಿಗಳು ಏಕೆ ಇವೆ: ನೂರಾರು ಅಥವಾ ಸಾವಿರಾರು ವರ್ಷಗಳ ಹಿಂದಿನ ಜೀವನಕ್ಕು ಮತ್ತು ಇಂದಿನ ಜೀವನಕ್ಕು ಅಜಗಜಾಂತರ ವ್ಯತ್ಯಾಸಗಳು ನಮಗೆ ಕಂಡು ಬರುತ್ತವೆ. ಇಂದು ನಾವು ಆಚರಿಸುತ್ತಿರುವ ಎಷ್ಟೋ ಸಂಪ್ರದಾಯಗಳು ಇಂದು-ನಿನ್ನೆ ಜನ್ಮ ತಾಳಿದವಲ್ಲ. ಅವುಗಳೆಲ್ಲವು ಹಿಂದೆಂದೊ ಜನ್ಮ ತಳೆದಿವೆ. ನೀವು ಎಂದಾದರು ಆಲೋಚಿಸಿದ್ದೀರೇ? ನಾವೇಕೆ ವರ್ಷಕ್ಕೆ ಒಂದು ದೀಪಾವಳಿ, ಹೋಳಿಯನ್ನು ಆಚರಿಸುತ್ತೇವೆ ಆದರೆ ನವರಾತ್ರಿಯನ್ನು ಮಾತ್ರ ಎರಡು ಬಾರಿ ಆಚರಿಸುತ್ತೇವೆ.

ಹೌದು ವಸಂತ ನವರಾತ್ರಿ ಮತ್ತು ಶರನ್ನಾವರಾತ್ರಿ ಎಂಬ ಎರಡು ನವರಾತ್ರಿಗಳನ್ನು ನಾವು ಆಚರಿಸುತ್ತೇವೆ. ಈ ಎರಡು ಮಾಸಗಳು ಋತು ಬದಲಾವಣೆಯನ್ನು ಹೊಂದಿರುವ ಮಾಸಗಳಾಗಿದ್ದು, ನಮ್ಮ ಆಹಾರ ಸೇವನೆಯ ಕ್ರಮವು ಈ ಅವಧಿಯಲ್ಲಿ ಪರಸ್ಪರ ಬದಲಾವಣೆಯಿಂದ ಕೂಡಿರುತ್ತದೆ. ನವರಾತ್ರಿಗಳು ನಮ್ಮನ್ನು ನಾವು ಈ ಆಹಾರ ಪದ್ಧತಿಗೆ ಹೊಂದಿಕೊಳ್ಳುವಂತೆ ಮಾಡುವ ಗುಣಗಳನ್ನು ಹೊಂದಿದೆ.

ಅದು ಹೇಗೆಂದರೆ ಆಸ್ತಿಕ ಭಕ್ತ ಸಮೂಹವು ಈ ನವರಾತ್ರಿಗಳ ಸಂದರ್ಭದಲ್ಲಿ ಉಪವಾಸವಿರುತ್ತಾರೆ. ಇದರಿಂದ ಅವರು ಹೊಸ ಆಹಾರ ಶೈಲಿಗೆ ಒಗ್ಗಿಕೊಳ್ಳುತ್ತಾರೆ. ಈ ಅವಧಿಯಲ್ಲಿ ಜನರು ಉಪ್ಪು ಮತ್ತು ಸಕ್ಕರೆಯನ್ನು ಮಿತ ಪ್ರಮಾಣದಲ್ಲಿ ಸೇವಿಸುತ್ತಾರೆ. ಇದರಿಂದಾಗಿ ಹೆಚ್ಚಿನ ಧನಾತ್ಮಕ ಶಕ್ತಿಯನ್ನು, ಆತ್ಮ ವಿಶ್ವಾಸವನ್ನು ಮತ್ತು ದೃಢ ನಿರ್ಧಾರದ ಶಕ್ತಿಯನ್ನು ( ಉಪವಾಸ ಮಾಡುವುದರಿಂದ ದೃಢ ನಿರ್ಧಾರ ಕೈಗೊಳ್ಳುವ ಶಕ್ತಿಯು ಹೆಚ್ಚಾಗುತ್ತದೆ) ಹೆಚ್ಚಿಸುತ್ತದೆ ಮತ್ತು ಕೊನೆಗೆ ಆ ಋತುವಿನಲ್ಲಿ ಸಂಭವಿಸುವ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ದೇಹಕ್ಕೆ ನೀಡುತ್ತದೆ.

9. ಖಾರದ ಜೊತೆಗೆ ಆರಂಭ ಮತ್ತು ಸಿಹಿಯ ಜೊತೆಗೆ ಮುಕ್ತಾಯ: ನಮ್ಮ ಪೂರ್ವಿಕರು ನಮಗೆ ಹೇಳಿರುವುದು ಹೀಗೆ: ಊಟ ಮಾಡುವಾಗ ಖಾರವನ್ನು ಮೊದಲು ಸೇವಿಸಿ ತದನಂತರ ಮುಕ್ತಾಯ ಮಾಡುವಾಗ ಸಿಹಿಯನ್ನು ಸೇವಿಸಿ ಎಂದು.ಇದರ ಹಿಂದಿನ ಕಾರಣವೇನೆಂದರೆ, ಖಾರವು ನಮ್ಮ ಹೊಟ್ಟೆಯಲ್ಲಿ ಜೀರ್ಣ ಮಾಡುವಂತಹ ಆಮ್ಲಗಳನ್ನು ಉತ್ಪತ್ತಿ ಮಾಡುತ್ತದೆ ಮತ್ತು ಜೀರ್ಣ ಕ್ರಿಯೆಯನ್ನು ಪ್ರಚೋದಿಸುತ್ತದೆ.

ಇದರಿಂದ ಜೀರ್ಣ ಕ್ರಿಯೆ ಯಾವುದೇ ಅಡೆತಡೆಗಳಿಲ್ಲದೆ ಸಾಗುತ್ತದೆ. ಇನ್ನೂ ಸಿಹಿ ತಿಂಡಿಗಳು ಅಥವಾ ಕಾರ್ಬೋಹೈಡ್ರೇಟ್‍ಗಳು ಜೀರ್ಣ ಕ್ರಿಯೆಯನ್ನು ಕೆಳಗೆ ಎಳೆಯುವ ಸಾಮರ್ಥ್ಯವನ್ನು ಹೊಂದಿವೆ. ಇದರಿಂದಾಗಿ ಜೀರ್ಣವಾದ ಆಹಾರವು ಸರಾಗವಾಗಿ ಕರುಳುಗಳಲ್ಲಿ ಸಾಗಿ ಹೋಗುತ್ತದೆ. ಇದಕ್ಕಾಗಿಯೇ ಸಿಹಿಯನ್ನು ಕಡೆಯಲ್ಲಿ ಸೇವಿಸಿ ಎಂದು ಹೇಳುವುದು.

10 ಕೈಗಳಿಗೆ ಮೆಹಂದಿ/ಹೆನ್ನಾವನ್ನು ಹಚ್ಚಿಕೊಳ್ಳುವುದು: ಕೈಗಳಿಗೆ ಅಲಂಕಾರವನ್ನು ನೀಡುವುದರ ಜೊತೆಗೆ ಮೆಹಂದಿಯು ತನ್ನಲ್ಲಿರುವ ಔಷಧೀಯ ಗುಣಗಳಿಂದ ಖ್ಯಾತಿ ಪಡೆದಿದೆ. ಮದುವೆಯು ಅತ್ಯಂತ ಒತ್ತಡಕಾರಿಯಾಗಿರುವ ಸಂಗತಿ ಎಲ್ಲರಿಗು ತಿಳಿದ ವಿಚಾರವೇ. ಈ ಒತ್ತಡವು ತಲೆನೋವು ಮತ್ತು ಜ್ವರವನ್ನು ತರಬಹುದು. ಆದ್ದರಿಂದ ಮದುವೆ ದಿನ ಹತ್ತಿರ ಬಂದಾಗ ವಧುವಿಗೆ ಮೆಹಂದಿಯನ್ನು ಹಚ್ಚುತ್ತಾರೆ.

ಇದರಿಂದ ವಧುವಿಗೆ ಒತ್ತಡವು ಕಡಿಮೆಯಾಗುತ್ತದೆ ಮತ್ತು ಆಕೆಯ ದೇಹಕ್ಕೆ ಇದು ತಂಪನ್ನು ನೀಡಿ, ನರಗಳು ಒತ್ತಡಕ್ಕೆ ಒಳಗಾಗುವುದನ್ನು ತಡೆಯುತ್ತದೆ. ಆದ್ದರಿಂದಲೇ ಮೆಹಂದಿಯನ್ನು ನರಗಳು ಕೊನೆಗೊಳ್ಳುವ ಭಾಗದಲ್ಲಿ ಅಂದರೆ, ಅಂಗೈ ಮತ್ತು ಅಂಗಾಲುಗಳಿಗೆ ಹಚ್ಚುತ್ತಾರೆ.

11. ದೀಪಾವಳಿಯ ಆಚರಣೆ ಮತ್ತು ಅದಕ್ಕೆ ಸಂಬಂಧಿಸಿದ ಸ್ವಚ್ಛತಾ ಕಾರ್ಯಗಳು: ದೀಪಾವಳಿಯು ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಅಂದರೆ ಚಳಿಗಾಲದ ಆರಂಭ ಕಾಲದಲ್ಲಿ ಬರುತ್ತದೆ. ಆಗ ತಾನೇ ಮಳೆಗಾಲವು ಮುಗಿದಿರುತ್ತದೆ ಈ ಕಾಲದಲ್ಲಿ. ಮಳೆಗಾಲವು ಎಲ್ಲರಿಗು ತಿಳಿದಂತೆ ಪ್ರತಿಯೊಂದಕ್ಕು ಹಾನಿಯನ್ನು ಮಾಡಿರುತ್ತದೆ.

ಸುಮಾರು ಮನೆಗಳು ಇದರಿಂದ ಹಾನಿಗೆ ಒಳಗಾಗಿರುತ್ತವೆ. ಸುಮಾರು ಮನೆಗಳ ದುರಸ್ತಿ ಕಾರ್ಯವು ನಡೆಯಬೇಕಾಗಿರುತ್ತದೆ. ಆದ್ದರಿಂದ ಚಳಿಗಾಲದ ಆರಂಭದಲ್ಲಿ ಬರುವ ಈ ಹಬ್ಬದ ನೆಪದಲ್ಲಿ ಸುಮಾರು ಜನರು ತಮ್ಮ ಮನೆಗಳನ್ನು ದುರಸ್ತಿ ಮಾಡಿಕೊಳ್ಳುತ್ತಾರೆ. ಮನೆಗೆ ಸುಣ್ಣ – ಬಣ್ಣ ಬಳಿದು ಅಂದವನ್ನು ಸಹ ಹೆಚ್ಚಿಸುತ್ತಾರೆ. ಜೊತೆಗೆ ಚಳಿಗಾಲದ ಉಡುಗೆ-ತೊಡುಗೆಗಳನ್ನು ಸಹ ಕೊಂಡುಕೊಳ್ಳುತ್ತಾರೆ.

ಗುಣಾತ್ಮಕ ಮಾಹಿತಿಯನ್ನು ನೀಡಿದ ಶ್ರೀಯುತರಿಗೆ ನಮಿಸುತ್ತಾ, ನಿಮಗೆ ಯಥಾವತ್ತಾಗಿ ನಿವೇದಿಸಿದ್ದೇನೆ. ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

LEAVE A REPLY

Please enter your comment!
Please enter your name here